Home BIG BREAKING

Category: BIG BREAKING

Post
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...

Post
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Post
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.

Post
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ...

Post
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ. ದಿಟ್ಟ ಹೆಜ್ಜೆ..! ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ...

Post
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..!  ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!

ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!

ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..!...

Post
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!

ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!

ಕಾರವಾರ:ಮಾಜಿ ವಿಧಾನ ಪರಿಷತ್‌ ಸದಸ್ಯೆ ಶುಭಲತಾ ಅನ್ನೋಟಿಕರ್ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅನ್ನೋಟಿಕರ್ ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಇಂದು ಸಂಜೆ 5 ಘಂಟೆ 8 ನಿಮಿಷಕ್ಕೆ ವೇಳೆಗೆ ಶುಭಲತಾ ಅವರು ಮೃತಪಟ್ಟಿದ್ದಾರೆ. ಪತಿ ಶಾಸಕರಾಗಿದ್ದ ವಸಂತ್ ಅನ್ನೋಟಿಕರ್ ಹತ್ಯೆಯ ನಂತರ ಶುಭಲತಾ ಇಡೀ ಕುಟುಂಬದ ಜವಬ್ದಾರಿ ಹೊತ್ತಿದ್ದರು. ಕ್ಷೇತ್ರದಲ್ಲಿ ಅನ್ನೋಟಿಕರ್ ಅಭಿಮಾನಿಗಳ ಜೊತೆ ನಿಂತಿದ್ದ ಶುಭಲತಾರನ್ನ ವಿಧಾನ ಪರಿಷತ್‌...

Post
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!

ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಅಂಗನವಾಡಿ ಕಾರ್ಯಕರ್ತೆ ಯಾಗಿ ಕೆಲಸ ಮಾಡುತ್ತಿದ್ದರು. ಜಿಪಂ...

Post
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!

ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!

ಕಾರವಾರ : ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ‌ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಣಕೋಣ ಸಾಂತೇರಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ನಡೆದಿದೆ‌. ಘಟನೆಯಲ್ಲಿ ವಿನಾಯಕ ನಾಯ್ಕ(58) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ‌ ಇನ್ನೂ ಆತನ ಪತ್ನಿ ವಿಶಾಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದಾಳೆ. ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇತ್ತಿಚೇಗೆ ಹಣಕೋಣದ ಸಾಂತೇರಿ ದೇವರ ಜಾತ್ರೆಗಾಗಿ ಊರಿಗೆ ಬಂದಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ‌. ಇಂದು ಬೆಳಿಗ್ಗಿನ ಜಾವ 5ಗಂಟೆ...

error: Content is protected !!