Home BIG BREAKING

Category: BIG BREAKING

Post
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

 ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ‌. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...

Post
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

 ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ‌. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...

Post
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!

ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...

Post
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!

ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.

Post
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್,   ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ...

Post
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..!  ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

 ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...

Post
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕ‌ಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...

error: Content is protected !!