Home BIG BREAKING

Category: BIG BREAKING

Post
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?

ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?

ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...

Post
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?

ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?

ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...

Post
ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!

ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!

ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.  

Post
ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!

ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!

ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ‌. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ...

Post
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Post
ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!

ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!

ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ...

Post
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್‌ಗಾಗಿ ತೀವ್ರ...

Post
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಮೂಡಸಾಲಿಯ ಯುವಕನ ಶವ ಪತ್ತೆಯಾಗಿದೆ. ಮಾರಿಕಾಂಬಾ ಲೈಫ್ ಗಾರ್ಡ್ ಹಿರೇಕಲ್ ನ ಗೋಪಾಲ್ ನಾರಾಯಣ್ ಗೌಡಾರವರು ಶವ ಪತ್ತೆ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರ ಜಂಟೀ ಕಾರ್ಯಾಚರಣೆಯಲ್ಲಿ ಶವ ಹೊರ ತೆಗೆಯಲಾಗಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಹೀಗಾಗಿ, ನಿನ್ನೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದತ್ತು. ಇಂದು ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಂಡಗೋಡ ಪಿಎಸ್ಐ ಪರಶುರಾಮ್ ಹಾಗೂ...

Post
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು...

Post
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!

ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!

ಮುಂಡಗೋಡ ತಾಲೂಕಿನ ಕಲಕೇರಿಯಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.. ಗದ್ದೆಯಲ್ಲಿ ಭತ್ತದ ನಾಟಿ ಕೆಲಸದ ತಯಾರಿ ನಡೆದಿತ್ತು. ಎತ್ತುಗಳ ಜೊತೆಯಲ್ಲಿ ರೈತ ರಾಜಣ್ಣ ಮುಕ್ಕನಕಟ್ಟಿ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಎತ್ತು ವಿದ್ಯುತ್ ಕಂಬದ ಹತ್ತಿರ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ. ಹೀಗಾಗಿ, ತಕ್ಷಣವೇ ವಿದ್ಯುತ್ ಪ್ರವಹಿಸಿ ಹೋರಿ ಮೃತಪಟ್ಟಿದೆ. ಬಚಾವ್ ಮಾಡಲು ಹೋದ ರೈತನಿಗೂ ವಿದ್ಯುತ್ ಸಂಚಾರದ ಅನುಭವವಾಗಿದೆ. ಅದೃಷ್ಟವಶಾತ್ ರೈತನ ಸಮಯ ಪ್ರಜ್ಞೆಯಿಂದ ಅವ್ರಿಗೆ ಏನೂ...

error: Content is protected !!