Home BIG BREAKING

Category: BIG BREAKING

Post
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...

Post
ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

 ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...

Post
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...

Post
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್,  ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ‌. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...

Post
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?

ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?

 ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು‌ ಮುಟ್ಟಿದೆ‌. ಒಳ‌ಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...

Post
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ‌. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ‌. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...

Post
ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್:  ಮೇ10 ರಂದು ಮತದಾನ, ಮೇ 13ರಂದು ಫಲಿತಾಂಶ..! ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ.!

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ10 ರಂದು ಮತದಾನ, ಮೇ 13ರಂದು ಫಲಿತಾಂಶ..! ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ.!

ಅಂತೂ ಇಂತೂವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ಮೇ 10 ರಂದು ಮತದಾನ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನ ಮಾಡಲಾಗಿದೆ. ಮೇ.13 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಅಂದೇ ಫಲಿತಾಂಶ ಹೊರಬೀಳಲಿದೆ.

Post
ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!

ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!

ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ‌ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.

Post
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ‌. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!

error: Content is protected !!