ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Category: BIG BREAKING
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!
ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....