Home BIG BREAKING

Category: BIG BREAKING

Post
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

 ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ‌. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...

Post
ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ‌. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಘಟನೆಯಲ್ಲಿ...

Post
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?

ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?

 ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ‌ ಪ್ರಧಾನಿ ಮೋದಿ..! ಅಷ್ಟಕ್ಕೂ...

Post
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...

Post
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...

Post
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

 ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ‌ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...

Post
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...

Post
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

Post
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...

error: Content is protected !!