Home BIG BREAKING

Category: BIG BREAKING

Post
ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!

ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕರಗಿನಕೊಪ್ಪ ತಾಂಡಾದ ಶಿವಾಜಿ ನಾಗಪ್ಪ ಲಮಾಣಿ(32) ಎಂಬುವ ಯುವಕನೇ ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಕಟ್ಟಿಗೆ ತುಂಬಿಕೊಂಡು ಹೊರಟಿದ್ದ ಟಿಪ್ಪರ್, ಬೈಕ್ ಗೆ ಡಿಕ್ಕಿಯಾಗಿದೆ‌. ಪರಿಣಾಮ ಬೈಕ್ ನಲ್ಲಿದ್ದ ಶಿವಾಜಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ....

Post
ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!

ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ...

Post
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾಳೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ವಾಗಲಿದ್ದು, ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್‌...

Post
ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!

ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!

ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ. ಕುಮಟಾ ಮೂಲದ ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದಾರೆ. ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ಎರಡು...

Post
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!

ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...

Post
ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!

ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!

 ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಸಂಜೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಅರೆನಗ್ನ ಸ್ಥಿತಿಯಲ್ಲಿ ಏಕಾಏಕಿ ಮನೆಗಳಿಗೆ ನುಗ್ಗಿ ಅವಾಚ್ಯವಾಗಿ ನಿಂದಿಸುತ್ತಿದ್ದ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಕಂಡ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದರು. ಆತ ಬಿಹಾರಿ..! ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ. ಆದ್ರೆ ಜನ ಮಾತ್ರ ಆತ ನಡೆದುಕೊಂಡ ರೀತಿ ನೋಡಿ ಭಯಭೀತಗೊಂಡು ಆತನನ್ನು ಕಳ್ಳ‌ ಇರಬಹುದು ಅಂತ ಭಾವಿಸಿದ್ರು. ಹೀಗಾಗಿ, ತಕ್ಷಣವೇ 112 ಪೊಲೀಸರಿಗೆ ಕರೆ...

Post
ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!

ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!

ಮುಂಡಗೋಡ ಪಿಐ ಗದರಿಸಿದ್ರು ಅಂತಾ ಶಾಲೆ ಬಿಟ್ಟು ಮನೆಯಲ್ಲೇ ಕುಳಿತ ಹುಲಿಹೊಂಡದ ವಿದ್ಯಾರ್ಥಿನಿಯ ಮನೆಗೆ, ಖುದ್ದು ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಭೇಟಿ ನೀಡಿ ಬಾಲಕಿಗೆ ದೈರ್ಯ ತುಂಬಿದ್ದಾರೆ. ಈ ಮೂಲಕ ಅದೇನೋ ಕೆಲಸದ ಟೆನ್ಶೆನ್ ನಲ್ಲಿ ಆಗಿ ಹೋಗಿದ್ದ ಘಟನೆಗೆ ಮಮ್ಮಲ ಮರುಗಿದ್ದಾರೆ. ಸದ್ಯ ಬಾಲಕಿ ಚೇತರಿಸಿಕೊಂಡು ಶಾಲೆಗೆ ಹೋಗಲು ರೆಡಿಯಾಗಿದ್ದಾಳೆ. ಹಾಗಂತ ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ.  ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಹೀಗಾಗಿ, ವರದಿ ಪ್ರಸಾರವಾದ ಬೆನ್ನಲ್ಲೇ...

Post
“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!

“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!

 ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...

Post
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

 ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...

Post
ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!

ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!

ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು...

error: Content is protected !!