Home BIG BREAKING

Category: BIG BREAKING

Post
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ‌. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...

Post
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ‌. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...

Post
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...

Post
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...

Post
ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ‌. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಮುಂಡಗೋಡ ತಾಲೂಕಿ‌ನ ಹಲವೆಡೆ ಆಲಿಕಲ್ಲು, ಗಾಳಿ ಸಮೇತ ಭಾರೀ ಮಳೆ..!

ಮುಂಡಗೋಡ ತಾಲೂಕಿ‌ನ ಹಲವೆಡೆ ಆಲಿಕಲ್ಲು, ಗಾಳಿ ಸಮೇತ ಭಾರೀ ಮಳೆ..!

ಮುಂಡಗೋಡ: ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ಮತ್ತೆ ತಂಪೆರೆದಿದ್ದಾನೆ. ಮಳೆಯ ದೃಷ್ಯ ಕ್ಯಾಮೆರಾ ಕಣ್ಣಲ್ಲಿ.. ಅಲಿಕಲ್ಲು ಮಳೆ..! ಅಂದಹಾಗೆ, ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ನಂತರ ಧಾರಾಕಾರ ಆಲಿಕಲ್ಲು ಬಿದ್ದಿವೆ. ಪರಿಣಾಮ ತಾಲೂಕಿನ ಮಾವು ಬೆಳೆಗಾರರಿಗೆ ತೀವ್ರ ಸಂಕಷ್ಟ ಎದುರಾದಂತೆ...

Post
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...

Post
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...

Post
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ‌ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು‌. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...

Post
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಅಂಕೋಲಾ: ಉದ್ಯಮಿ ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ‌‌‌.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...

error: Content is protected !!