ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Category: BIG BREAKING
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ...
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!
ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ...
ಶಿವರಾಮ್ ಹೆಬ್ಬಾರ್ ಅಸಲಿ ಆಟ ಶುರು, ಕಾಂಗ್ರೆಸ್ ಸೇರಲ್ವಂತೆ ಸಾಹೇಬ್ರು..!
ಇದು ನಿಜಕ್ಕೂ ಮುಂಡಗೋಡ ಯಲ್ಲಾಪುರ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾದ ಸುದ್ದಿ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸದ್ಯ ಕಾಂಗ್ರೆಸ್ ಸೇರೋದಿಲ್ಲ. ಬದಲಾಗಿ, ಹೆಬ್ಬಾರ್ ರವರ ಸುಪುತ್ರ ವಿವೇಕ್ ಹೆಬ್ಬಾರ್ ಇನ್ನೇನು ಕೆಲವೇ ದಿನಗಳಲ್ಲಿ ಕೈ ಹಿಡಿಯಲಿದ್ದಾರೆ ಅನ್ನೋದು ಕನ್ಪರ್ಮ್ ಆಗ್ತಿದೆ. ಈ ಮೂಲಕ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಅಕ್ಷರಶಃ ತಟಸ್ತರಾಗಿ ಕಮಲ ಪಾಳಯಕ್ಕೆ ಡಿಚ್ಚಿ ಕೊಡುವ ಎಲ್ಲಾ ತಯಾರಿ ಮಾಡಿಕೊಂಡಿದ್ದಾರಂತೆ ಹೆಬ್ಬಾರ್ ಸಾಹೇಬ್ರು..! ಹಳ್ಳಿ ಹಳ್ಳಿಗಳಲ್ಲೂ ಸಭೆ..! ಇಂತಹದ್ದೊಂದು ಕಾರ್ಯತಂತ್ರ ರೂಪಿಸಿಕೊಂಡಿರೋ ಶಿವರಾಮ್ ಹೆಬ್ಬಾರ್,...
ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!
ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು. ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ. ಕಾಂಗ್ರೆಸ್ ನಿಂದ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು...
ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗುತ್ತಿದ್ದಂತೆ ಸಂಸದ, ಹಿಂದು ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ಕ್ಷೇತ್ರದ ಬೆಂಬಲಿಗರಿಗೆ, ಮತದಾರರಿಗೆ ಪತ್ರದ ಮೂಲಕ ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ. ಅನಂತಣ್ಣನ ಪತ್ರದ ಸಾರಾಂಶ..! ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ...
ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!
ಕೊನೆಗೂ ಅನಂತಕುಮಾರ್ ಹೆಗಡೆಯವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳು ಬಾರಿ ಗೆದ್ದು ಬೀಗಿದ್ದ ಅನಂತಣ್ಣನಿಗೆ ಬಿಜೆಪಿ ಠಕ್ಕರ್ ಕೊಟ್ಟಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಬಾರಿ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನು ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ...
ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ...