Home BIG BREAKING

Category: BIG BREAKING

Post
ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ,   ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!

ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ, ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!

 ಯಲ್ಲಾಪುರ ತಾಲೂಕಿನ ಅರಬೈಲಿನಲ್ಲಿ ಬೆಳ್ಳಂ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಹಿತ್ತಲಿನ ಬಾವಿಯಲ್ಲಿ ಬಿದ್ದಿರೋ ಚಿರತೆ ಬಾವಿಯಿಂದ ಮೇಲೆ ಬರಲು ಪರದಾಡುತ್ತಿದೆ. ಆದ್ರೆ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ತಕ್ಷಣವೇ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದ್ರೆ, ಈ ವಿಷಯ ಯಾರಿಗೂ ಹೆಳಬೇಡಿ ಅಂತಾ ಮನೆಯವರಿಗೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರಂತೆ. ಅಂದಹಾಗೆ, ಯಲ್ಲಾಪುರ ತಾಲೂಕಿನ ಅರೆಬೈಲು ಗ್ರಾಮದ ಕೋವಿಂದ ನಾಯರ್ ಎಂಬುವವರ ಮನೆಯ ಬಾವಿಯಲ್ಲಿ ಘಟನೆ ನಡೆದಿದೆ. ಬಹುಶಃ ನಿನ್ನೆ ರಾತ್ರಿಯೇ ಮನೆಗೆ...

Post
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು...

Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ  ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳ‌ರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ...

Post
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!

ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!

ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ‌ ಮಾಹಿತಿ ಪ್ರಕಾರ ಇವತ್ತಿನ...

Post
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..!  ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?

ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?

ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...

Post
ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟೂ ಇಡೀ ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದ್ರಲ್ಲಿ ಕರ್ನಾಟಕದಲ್ಲಿ ಎಪ್ರಿಲ್ 26 ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಮೇ 7 ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಸುದ್ದಿಗೋಷ್ಟಿಯ ಮೂಲಕ ಹೊರಬಿದ್ದಿದೆ.

Post
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಹಾರವಳ್ಳಿ‌‌ ಗ್ರಾಮದ ಹತ್ತಿರ ಮಾಜಿ ಶಾಸಕ‌ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ‌ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...

Post
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...

Post
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

 ಸಂಪಾಯಿತಲೇ ಪರಾಕ್” ಇದು ಪ್ರಸಕ್ತ ವರ್ಷದ ಶ್ರೀ ಕ್ಷೇತ್ರ ಮೈಲಾರಲಿಂಗನ ಕಾರಣಿಕ ನುಡಿ. ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಕಾರಣೀಕ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್” ಕಾರ್ಣಿಕದ ನುಡಿ ನುಡಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸೂಚನೆ...

Post
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..!  ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...

error: Content is protected !!