ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು..

ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು..
ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು..

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ, ಬಸವರಾಜ್ ಆಸ್ತಕಟ್ಟಿ, ಮರಿಯಪ್ಪ ಬೆನಕನಳ್ಳಿ, ಫಕ್ಕಿರಯ್ಯ ಹಿರೇಮಠ್, ಶೇಖಪ್ಪ ನಡುವಿನಮನಿ ಸೇರಿ ಹಲವರು ಉಪಸ್ಥಿತರಿದ್ದರು..

ಮುಂಡಗೋಡ ತಾಲೂಕಿನಲ್ಲಿ ಇಂದು ಲಾಡ್ ಪ್ರವಾಸ..
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ, ಮಾಜಿ ಸಚಿವ ಸಂತೋಷ್ ಲಾಡ್ ಇಂದು ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.. ಹುನುಗುಂದ ಗ್ರಾಮದಿಂದ ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಕಾರ್ಯಕರ್ತರನ್ನು ಭೇಟಿಯಾಗಲು ಆಗಮಿಸಿದ್ದಾರೆ. ಬೆಳಿಗ್ಗೆ ಹುನಗುಂದ, ಇಂದೂರ, ನಂದಿಗಟ್ಟಾ , ಉಗ್ಗಿನಕೇರಿ ,ಮೈನಳ್ಳಿ , ಚೌಡಳ್ಳಿ ,ಕಲಕೇರಿ, ಸಾಲಗಾಂವ , ಚಿಗಳ್ಳಿ, ಮುಡಸಾಲಿ, ಕಾತೂರು, ಓಣಿಕೇರಿ, ಪಾಳಾ, ಮಳಗಿ, ಕೋಡಂಬಿ, ಹನುಮಾಪುರ , ಅರಶಿಣಗೇರಿ ಸೇರಿ ಹಲವು ಗ್ರಾಮಗಳ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ..

error: Content is protected !!