ಮುಂಡಗೋಡ- ಪಟ್ಟಣದಲ್ಲಿ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ, ಮುಂಡಗೋಡ ಪಟ್ಟಣದ ಹೃದಯಭಾಗ ಶಿವಾಜಿ ಸರ್ಕಲ್ ನಲ್ಲಿ ಜನಸಂದಣಿ ಸೇರಿತ್ತು.

ಅಗತ್ಯ ವಸ್ತುಗಳ ಖರೀಧಿಗೆ ತಾಲೂಕಿನ ಗ್ರಾಮೀಣ ಭಾಗಗಳಿಂದ ಬಂದಿದ್ದ ಜನ ಅಗತ್ಯ ವಸ್ತುಗಳ ಖರೀಧಿಯಲ್ಲಿ ಮುಳುಗಿದ್ರು. ಪಟ್ಟಣದ ಬಹುತೇಕ ದಿನಸಿ ಅಂಗಡಿಗಳು ಫುಲ್ ಆಗಿದ್ದವು.

ಹೀಗಾಗಿ ಕೆಲವು ಕಡೆ ಸಾಮಾಜಿಕ ಅಂತರ ಅನ್ನೋದು ಮಂಗಮಾಯವಾಗಿತ್ತು. ಪೊಲೀಸರು ಎಷ್ಟೇ ಎಚ್ಚರಿಸಿದ್ರೂ ಜನ ಕ್ಯಾರೇ ಅನ್ನದೇ ಸಾಮಾಜಿಕ ಅಂತರ ಮರೆತು ಖರೀಧಿಯಲ್ಲಿ ಬ್ಯುಸಿಯಾಗಿದ್ರು.

error: Content is protected !!