ಮುಂಡಗೋಡ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೋರ್ವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮುಂಡಗೋಡ-ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ.
ಹೈನುಗಾರಿಕೆ ಮಾಡುತ್ತಿದ್ದ ವ್ಯಕ್ತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ, ಹೀಗಾಗಿ ಸಾಕಷ್ಟು ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಿರಲಿಲ್ಲ.
ಹೀಗಾಗಿ, ಅದನ್ನೇ ಮನಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮೃತನ ಸಹೋದರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.