ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ.

ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು.

ಇನ್ನು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು, ಐಟಿಸಿ ಗೋಡೌನ ಬಳಿಯಿರುವ ಸಿಸಿಟಿವಿ ಕ್ಯಾಮರಾಗಳ ಸಾಕ್ಷಿ ಹಿಡಿದು ಹಳಿಯಾಳ ರಸ್ತೆಯಲ್ಲಿ ಸಂಜೆ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!