ಹಳಿಯಾಳ : ಜೊಯಿಡಾ ತಾಲೂಕಿನ ಕ್ಯಾಸರಲಾಕ್ ಸಮೀಪದ ಕುಣಗಿನಿಯಲ್ಲಿರುವ ಶ್ರೀ ಸಂತೋಷಿ ಮಾತಾ ಕಾಳಿಕಾ ಮಠದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಆಶ್ರಮದ ಶ್ರೀ ರಘುವೀರ ಗುರೂಜಿಯವರು ಒಂದು ದಿನದ ಊಟದ ಪೊಟ್ಟಣವನ್ನು ವಿತರಿಸಿದರು.

150 ಕ್ಕೂ ಹೆಚ್ಚು ಊಟದ ಪೊಟ್ಟಣವನ್ನು ವಿತರಿಸಲಾಯ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಚವ್ವಾಣ, ಪ್ರಮುಖರಾದ ಮಾರುತಿ ನರಗುಂದಕರ, ಯಲ್ಲಪ್ಪಾ ಮಾಲವಣಕರ, ಯಶವಂತ ಪಟ್ಟೇಕರ, ಬಸವರಾಜ ಹಿರೆಮೊರಬ, ಆಶ್ರಮದ ರೂಪೇಶ ನಾಯ್ಕ, ಪಾಂಡುರಂಗ ಶೇಠ, ರಿಶ್ವಿತ್ ನಾಯ್ಕ, ಸಿದ್ದಾಂತ ಪರಬ ಮೊದಲಾದವರು ಇದ್ದರು.

error: Content is protected !!