ಮುಂಡಗೋಡ: ತಾಲೂಕಿನ ಇಂದೂರು ಗ್ರಾ‌ಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯೇ ಭಸ್ಮವಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಇಂದೂರು ಗ್ರಾಮದ ದ್ಯಾಮವ್ವ ದೇವಿ ದೇವಸ್ಥಾನದ ಹಿಂದುಗಡೆ ಇರುವ ಗೂಡುಮನಿ ಅತ್ತಾರ್ ಎಂಬುವ ಮಹಿಳೆಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಾಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಕೆಲವೇ ಹೊತ್ತಲ್ಲಿ ಇಡೀ ಮನೆಗೆ ಆವರಿಸಿದೆ.

ಪಬ್ಲಿಕ್ ಫಸ್ಟ್ ನ್ಯೂಸ್ TOP 5 ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೀಗಾಗಿ ಗ್ರಾಮಸ್ಥರು ತಕ್ಷಣವೇ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದ್ರೆ ಬೆಂಕಿ ತಹಬದಿಗೆ ಬರದೇ ಇದ್ದಾಗ, ಮುಂಡಗೋಡ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮದುವೆಗಾಗಿ ತಂದಿದ್ದ ವಸ್ತುಗಳು ಕರಕಲು: ಇನ್ನು ಬೆಂಕಿಯ ಕೆನ್ನಾಲಿಗೆಗೆ ಮಗಳ ಮದುವೆಗಾಗಿ ತಂದಿದ್ದ ಬಟ್ಟೆ ಬರೆಗಳು, ಪಾತ್ರೆಗಳು ಸುಟ್ಟು ಕರಕಲಾಗಿವೆ ಎನ್ನಾಲಾಗಿದ್ದು, 25 ಸಾವಿರ ರೂಪಾಯಿ ಹಣವೂ ಬೆಂಕಿಯಲ್ಲಿ ಸುಟ್ಟು ಹೋಗಿದೆ.

ಇನ್ನೇನು ಲಾಕ್ ಡೌನ್ ಮುಗಿದ ನಂತರ ಮಗಳ ಮದುವೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಮದುವೆಗಾಗಿ ತಂದಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

error: Content is protected !!