ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!

ಮುಂಡಗೋಡ: ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮೂಕ ಪ್ರಾಣಿಗಳೂ ಕೂಡ ಇನ್ನಿಲ್ಲದಂತೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಕೋ ಎನ್ನುತ್ತಿರೋ ಪಟ್ಟಣದ ಬೀದಿಗಳಲ್ಲಿ ಕರೆದು ಆಹಾರ ನೀಡುವವರಿಲ್ಲದೇ ಬಿಡಾಡಿ ದನಗಳು ಹಸಿವಿನಿಂದ ನರಳುತ್ತಿವೆ. ಶ್ವಾನಗಳು ತುತ್ತು ಕೂಳಿಗಾಗಿ ಅಲೆದಾಡುತ್ತಿವೆ.

ಹೀಗಾಗಿ ಇದನ್ನೇಲ್ಲ ನೋಡಿದ ಕೆಲ ಯುವಕರ ಟೀಂ‌ ಮುಂಡಗೋಡದಲ್ಲಿ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ.

ನಿಮಗೆ ನೆನಪಿರಲಿ, ಈಗ್ಗೆ ಕೆಲವೇ ದಿನಗಳ ಹಿಂದೆ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಮೂಕಪ್ರಣಿಗಳ ಮೂಕ ರೋಧನದ ಬಗ್ಗೆ ವರದಿ ಪ್ರಸಾರ ಮಾಡಿತ್ತು.

ಪಬ್ಲಿಕ್ ಫಸ್ಟ್ ನ್ಯೂಸ್ ಸುದ್ದಿಗೆ ಸ್ಪಂಧಿಸಿರೋ ನಂದಿಕಟ್ಟಾ ಗ್ರಾಮದ ಮಹಾರಾಜ್ ಹೋರಿ ಮಾಲೀಕರು ಹಾಗೂ ಅಭಿಮಾನಿಗಳು ಮುಂಡಗೋಡ ಪಟ್ಟಣದಲ್ಲಿ ಈ ಕಾರ್ಯ ಮಾಡುತ್ತಿದ್ದಾರೆ.

ಶ್ವಾನಗಳಿಗೆ ಹಾಗೂ ಬಿಡಾಡಿ ದನಗಳಿಗೆ ಮೇವು, ಆಹಾರ ನೀಡುವ ಮೂಲಕ ಮಾನವೀಯತೆ ಕಾರ್ಯ ತೋರಿದ್ದಾರೆ.

error: Content is protected !!