ಧಾರವಾಡ: ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ನಾನೇ ಅಂತಾ ಧಾರವಾಡದಲ್ಲಿ
ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ ಸ್ಪೋಟಕ ಹೇಳಿಕೆ ನೀಡಿದ್ದಾರೆ‌.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿರೋ ಅವ್ರು, ಬಿಎಸ್‌ವೈ ತಮ್ಮ ಆತ್ಮ ಶೋಧನೆ ಮಾಡಿಕೊಳ್ಳಲಿ, ಅದರ ಮೂಲಕ ನ್ಯಾಯಯುತವಾಗಿ ನಡೆದುಕೊಳ್ಳಲಿ, ಬೆಳೆಸಿದ ಪಕ್ಷದೊಂದಿಗೆ ನಿಷ್ಠೆಯಿಂದ ನಡೆದುಕೊಳ್ಳಬೇಕು, ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗಬೇಕು ಅಂತಾ ಎಚ್ಚರಿಸಿದ್ದಾರೆ.

ನಾನು ಬಿಜೆಪಿಗೆ ಬಂದಾಗ ಬಿಎಸ್‌ವೈ ಒಬ್ಬರೇ ಶಾಸಕರಿದ್ದರು, ಹೀಗಾಗಿ, ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ನಾನೇ ಕಾರಣ, ಬಿ‌ಎಸ್‌‌ವೈರನ್ನು ಸಿಎಂ ಮಾಡಿದ್ದೂ ಕೂಡ ನಾನೇ, ಇದು ಪಕ್ಷದ ಎಲ್ಲರಿಗೂ ಗೊತ್ತು, ರಾಜ್ಯದ ಎಲ್ಲ ನಾಯಕರಿಗೂ ಗೊತ್ತಿದೆ. ಬಿಜೆಪಿ ಬೆಳೆಸಿದ್ದು ಕೂಡ ನಾನೇ ಅಂತಾ ನಾಯಕರಿಗೆ ಗೊತ್ತಿದೆ ಅಂತಾ ಬೆಲ್ಲದ್ ತಿಳಿಸಿದ್ರು.

ಇನ್ನು, 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದೆ
ಆಗ ಧಾರವಾಡ ಕ್ಷೇತ್ರದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲಿಲ್ಲ, ಆಗ ಕಾಂಗ್ರೆಸ್ ವಿರುದ್ಧ 20 ಸಾವಿರ ಮತದಿಂದ ಸೋತಿದ್ದೆ ಆಗ ಕಾರ್ಯಕರ್ತರೂ ಇರಲಿಲ್ಲ ಅದು ಕೂಡ ವೈಯಕ್ತಿಕ ವ್ಯಕ್ತಿತ್ವದಿಂದ ನಾನು ಮತ ಪಡೆದಿದ್ದೆ. ನಾನು ಐದು ಬಾರಿ ಶಾಸಕನಾಗಿದ್ದೆ ಅಂತಾ ಚಂದ್ರಕಾಂತ್ ಬೆಲ್ಲದ್ ಹೇಳಿದ್ರು.

ತಮ್ಮನ್ನು ಸಿಎಂ ಮಾಡಿದ್ದು ಯಾರು ಅನ್ನೋದು ಬಿಎಸ್‌ವೈಗೂ ಗೊತ್ತಿತ್ತು,
ಆದರೂ ತನಗೆ ಸಚಿವ ಸ್ಥಾನ ಕೊಡಲಿಲ್ಲ.
ನನ್ನನ್ನೂ ಸಚಿವನನ್ನಾಗಿ‌ ಮಾಡಬೇಕಿತ್ತು ಆದ್ರೆ ಮಾಡಲಿಲ್ಲ, ನಂಗೆ ಸಚಿವನಾಗಲಿಲ್ಲ ಅನ್ನೋ ನೋವು ಕೂಡ ಇಲ್ಲ ಅಂತಾ ಇದೇ ವೇಳೆ ಅವ್ರು ತಿಳಿಸಿದ್ರು.

ಇನ್ನು, ಅರವಿಂದ ಬೆಲ್ಲದ್ ಗೆ ಸಚಿವ ಸ್ಥಾನದ ವಿಚಾರವಾಗಿ ಮಾತನಾಡಿದ ಚಂದ್ರಕಾಂತ್ ಬೆಲ್ಲದ್, ಅರವಿಂದ್ ಬೆಲ್ಲದ್ ಗೆ ಸಚಿವ ಸ್ಥಾನ ನೀಡೋದು, ಅದು ಪಕ್ಷಕ್ಕೆ ಬಿಟ್ಟ ವಿಚಾರ, ಆದ್ರೆ, ಸ್ಥಾನ ನೀಡಬೇಕು ಅನ್ನೋದು ಕ್ಷೇತ್ರದ ಜನರ ಆಶಯವಾಗಿದೆ ಅಂತಾ ಚಂದ್ರಕಾಂತ್ ಬೆಲ್ಲದ್ ಹೇಳಿದ್ರು.

error: Content is protected !!