ತುಮಕೂರು: ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆ ಹೆಸರಿನ ಸಂಘಟನೆ ಮೂಲಕ, ಬ್ರಷ್ಟಾಚಾರ, ಭಯೋತ್ಪಾದನೆ, ಲವ್ ಜಿಹಾದ್, ಅತ್ಯಾಚಾರ, ಗೋಹತ್ಯೆಯ ವಿರುದ್ಧ ಹೋರಾಟ ಮಾಡುತ್ತಿದ್ದ ಆ ವ್ಯಕ್ತಿ ಇಂದು ರಾಜ್ಯಪಾಲರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಹೌದು, ಮಧುಗಿರಿ ಮೋದಿ ಅಂತಲೇ ಹೆಸರಾಗಿರೋ ತುಮಕೂರು ಜಿಲ್ಲೆಯ ಅತುಲ್ ಕುಮಾರ್ ಹೀಗೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯದೆಲ್ಲೆಡೆ ಕೇಸ್..!
ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರೋ ಅತುಲ್ ಕುಮಾರ್ ವಿರುದ್ಧ
ರಾಜ್ಯದಲ್ಲಿ ಹಲವೆಡೆ ಪ್ರಕರಣ ದಾಖಲಾಗಿವೆ.
ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ಹೋರಾಟ ಮಾಡುವ ಅತುಲ್, ಈಗ ತುಮಕೂರು ಪೊಲೀಸರ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.

ಕಿರುಕುಳ ಕೊಟ್ರಾ ಪೊಲೀಸರು..?
ತುಮಕೂರು ಜಿಲ್ಲಾ ಪೋಲಿಸರಿಂದ ಪದೇ ಪದೇ ವಿಚಾರಣೆ ನೆಪದಲ್ಲಿ ಮಾನಸಿಕ ಕಿರುಕುಳ ಮಾಡಲಾಗುತ್ತಿದೆ. ಅನೇಕ ಬಾರಿ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದು ಪ್ರಕರಣ ದಾಖಲು ಮಾಡುತ್ತಿದ್ದಾರೆ ಅಂತಾ ಅತುಲ್ ಆರೋಪಿಸುತ್ತಿದ್ದಾರೆ.

ಆರ್ಥಿಕ ಸ್ಥಿತಿ ಸರಿಯಿಲ್ವಂತೆ..
ಈಗಿನ ನನ್ನ ಆರ್ಥಿಕ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ಕಾನೂನಿನ ಅಡಿಯಲ್ಲಿ ಬದುಕುವುದೇ ಕಷ್ಟವಾಗಿದೆ. ಹಾಗಾಗಿ ದಯಾ ಮರಣಕ್ಕೆ ಅವಕಾಶ ಮಾಡಿ ಕೊಡುವಂತೆ
ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಅತುಲ್ ಕುಮಾರ್ ಮನವಿ ಮಾಡಿದ್ದಾರೆ.

ಮಧುಗಿರಿ ಮೋದಿ ಹೇಳಿದ್ದಾದ್ರೂ ಏನು..,? ಇಲ್ಲಿದೆ ನೋಡಿ

error: Content is protected !!