ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ

ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು.

ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ ಮಾಡೋದು ಸರಿಯಲ್ಲ.
ಚುನಾವಣೆಗೆ ಇನ್ನೂ ಎರಡು ವರ್ಷಗಳಿದ್ದು, ಅಧಿಕಾರಕ್ಕೆ ಬಂದ ನಂತರ ಎಲ್ಲವೂ ನಿರ್ಧಾರ ಆಗಲಿದೆ ಎಂದರು.

ಕಾಂಗ್ರೆಸ್ ನಿಯಮಾವಳಿಯಂತೆ ಕೆಲ ಜಿಲ್ಲೆಗಳ ಅಧ್ಯಕ್ಷರ ಸ್ಥಾನ ಬದಲಾವಣೆ ಮಾಡಲು ರಾಜ್ಯಾಧ್ಯಕ್ಷರು ನಿರ್ಣಯಿಸಿದ್ದಾರೆ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದ ಆರ್ವಿಡಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ವತಃ ನಾನೇ ಮುಖ್ಯಮಂತ್ರಿ ಯಾಗಿ ಮುಂದುವರೆಯುತ್ತೇನೆ ಅಂತ ಹೇಳಿಕೆ ನೀಡೋದು ಹಾಸ್ಯಾಸ್ಪದ. ಕಾಂಗ್ರೆಸ್ ಸರ್ಕಾರವಿದ್ದಾಗ ಮಂಜೂರಾದ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಇದೀಗ ಸರಿಯಾಗಿ ಅನುದಾನ ಬಿಡುಗಡೆ ಆಗುತ್ತಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಆಡಳಿ ವೈಫಲ್ಯ ಕಾಣುತ್ತದೆ ಅಂತ ಟೀಕಿಸಿದರು.

ಹಾಗಾದ್ರೆ ಮಾಜಿ ಸಚಿವ ಆರ್.ವಿ.ದೇಶಾಪಾಂಡೆ ಏನ್ ಹೇಳಿದ್ರು..? ಇಲ್ಲಿದೆ ನೋಡಿ.. ಈ ಲಿಂಕ್ ಕ್ಲಿಕ್ ಮಾಡಿ..

error: Content is protected !!