ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು.

ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು.

ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ ಹಾಕಿ ಸನ್ಮಾನಿಸಿದ್ರು. ಕೆಲಹೊತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ಡಿಕೆಶಿ ಮುಂದೆ ಪ್ರಯಾಣ ಬೆಳೆಸಿದ್ರು.

error: Content is protected !!