ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆ, ವರ್ತಿಕಾ ಕಟಿಯಾರ್ ನೂತನ ಎಸ್ಪಿ..!

ಬೆಂಗಳೂರು : ರಾಜ್ಯ ಸರ್ಕಾರದಿಂದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ.

ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವ ಪ್ರಕಾಶ್ ದೇವರಾಜು ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಇನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ದಿವ್ಯಾ ಶರಾ ಥಾಮಸ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಸಂಗೀತಾ ಜಿ ಅವರನ್ನು ನೇಮಿಸಿದೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಅನುಪಮ್ ಅಗರ್ವಾಲ್ ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೆಚ್ ಡಿ ಆನಂದ್ ಕುಮಾರ್ ಅವರನ್ನು ನೇಮಕ ಮಾಡಿದೆ.

error: Content is protected !!