ಶಿರಸಿ: ಕೋಡಿಮಠದ ಶ್ರೀಗಳು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಸದ್ಯದ ರಾಜಕೀಯ ವಿಪ್ಲವಗಳ ಮದ್ಯೆ ಕೋಡಿಮಠದ ಶ್ರೀಗಳ ಭವಿಷ್ಯ ಕುತೂಹಲಕ್ಕೆ ಕಾರಣವಾಗಿದೆ.

ರಾಜಕೀಯ ಸುಖಾಂತ್ಯ..!
ರಾಜ್ಯದಲ್ಲಿ ಎದ್ದಿರೋ ರಾಜಕೀಯ ವಿಪ್ಲವ ಸದ್ಯದಲ್ಲೇ ಸುಖಾಂತ್ಯ ಕಾಣಲಿದೆ ಅಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ನೇರಲಕಟ್ಟೆ (ಈಚಲಬೆಟ್ಟ) ಗ್ರಾಮದಲ್ಲಿರೋ ಭೂದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಕೋಡಿಮಠದ ಶ್ರೀಗಳು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮಾತನಾಡೋ ಸ್ವಾತಂತ್ರ್ಯವಿದೆ. ಅದಕ್ಕೆ ಸ್ವಾಮೀಜಿಗಳು ಹೊರತಾಗಿಲ್ಲ’ ಅಂತ ಪರೋಕ್ಷವಾಗಿ ವೀರಶೈವ ಸ್ವಾಮೀಜಿಗಳ ನಡೆ ಸಮರ್ಥಿಸಿದರು.

ಧರ್ಮಸಂಕಟ..!
‘ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತಾಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ’ ಎಂದಷ್ಟೆ ಹೇಳಿದ್ರು..

ಸಂಕ್ರಾಂತಿಯೊಳಗೆ ದೊಡ್ಡ ದುರಂತ..!
ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ’ ಅಂತಾ ಕೋಡಿಮಠದ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕೊರೋನಾ ಕ್ರೌರ್ಯ..?
ಇನ್ನು, ಬರುವ ಆಗಸ್ಟ್‌ ಮೂರನೇ ವಾರದಿಂದ ಕೋವಿಡ್ ಹಾವಳಿ ಮತ್ತೆ ಹೆಚ್ಚಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲ್ಲೇ ಸಾಯುವವರ ಸಂಖ್ಯೆ ಹೆಚ್ಚಲಿದೆ. ಜನ ಧೈರ್ಯ ಕಳೆದುಕೊಳ್ಳಬಾರದು’ ಅಂತಾ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜಲಪ್ರಳಯ..?
ಇನ್ನು ಈ ವರ್ಷ ರಾಜ್ಯದಲ್ಲಿ ‘ಮಳೆ, ಗಾಳಿ ಅಧಿಕವಾಗಲಿದೆ. ಕೆರೆಕಟ್ಟೆಗಳು ಭರ್ತಿಯಾಗಿ, ಜಲಪ್ರಳಯ ಸಂಭವಿಸಲಿದೆ. ಪಂಚಭೂತಗಳಿಂದಲೂ ಈ ವರ್ಷ ಅನಾಹುತ ಸಂಭವಿಸಲಿದೆ’ ಅಂತಾ ಕೋಡಿಮಠದ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದಾರೆ.

 

error: Content is protected !!