ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಯಲ್ಲಾಪುರದ ಕಿರವತ್ತಿಯಲ್ಲಿ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಾಯಿತು.

ಸಿಎಂ ಆದ ಬಳಿಕ ಮೊದಲು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರೋ ನೂತನ ಸಿಎಂ ಬೊಮ್ಮಾಯಿ, ಕಿರವತ್ತಿಯಿಂದ ನೇರವಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಅಗಮಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ನೀಡಿರೋ ಡಯಾಲಿಸಿಸ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಆನಂತರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ತೆರಳಲಿದ್ದಾರೆ.

ಇನ್ನು ನೂತನ ಸಿಎಂ ಸ್ವಾಗತಕ್ಕೆ ಮಳೆರಾಯನೂ ಸಜ್ಜಾಗೇ ನಿಂತಿದ್ದ, ಸಿಎಂ ಆಗಮನಕ್ಕೂ ಮುನ್ನವೇ ಯಲ್ಲಾಪುರ ಪಟ್ಟಣ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ.

ಇನ್ನು ಸುರಿಯುವ ಮಳೆಯಲ್ಲಿಯೇ ಸಿಎಂಗೆ ಪೊಲೀಸರಿಂದ ಗಾಡ್ ಆಫ್ ಹಾನರ್ ಗೌರವ ಸಮರ್ಪಣೆ ಮಾಡಲಾಯಿತು. ಯಲ್ಲಾಪುರದ ತಾಲೂಕು ಆಸ್ಪತ್ರೆ ಬಳಿ ನೂತನ ಸಿಎಂ ಗೌರವ ವಂದನೆ ಸ್ವೀಕರಿಸಿದ್ರು.

error: Content is protected !!