ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸುತ್ತಿರೋ ಹಿನ್ನೆಲೆಯಲ್ಲಿ, ಇಂದು ಪ್ರಮಾಣ ವಚನ ಸ್ವೀಕರಿಸಿದ ವೇಳೆ ಮುಂಡಗೋಡಿನಲ್ಲಿ ಹೆಬ್ಬಾರ್ ಬೆಂಬಲಿಗರು ಸಂಭ್ರಮಿಸಿದ್ರು‌.

ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು , ಹೆಬ್ಬಾರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು.

ಈ ವೇಳೆ ಬಿಜೆಪಿ ಮುಖಂಡ ಸಿದ್ದಪ್ಪ ಹಡಪದ್, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ಭರತ್ ಹದಳಗಿ, ಪ್ರಶಾಂತ್ ಲಮಾಣಿ, ರಾಮಣ್ಣ ಲಮಾಣಿ, ಯಲ್ಲಪ್ಪ ಮಜ್ಜಿಗೇರಿ, ಅಶೋಕ ಹಸರಂಬಿ ಸೇರಿದಂತೆ ಹಲವ್ರು ಭಾಗವಹಿಸಿದ್ರು.

error: Content is protected !!