ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಇಬ್ಬರು ಮಹಿಳೆಯರ ಮೇಲೆ ಚಿರತೆ ಮರಿ ದಾಳಿ ಮಾಡಿದೆ ಅನ್ನೋ ಮಾಹಿತಿ ಲಭ್ಯವಾಗಿದೆ‌.

ಇಂದು ಬೆಳಿಗ್ಗೆ ಗದ್ದೆಯ ಕೆಲಸಕ್ಕಾಗಿ ಹೋಗುತ್ತಿದ್ದ ವೇಳೆ ಎರಡು ಮರಿಗಳೊಂದಿಗೆ ಚಿರತೆ ಅಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಆ ವೇಳೆ ತಾಯಿ ಚಿರತೆ ಮುಂದೆ ಹೋಗಿದೆ. ಆದ್ರೆ ಚಿರತೆ ಮರಿಗಳು ಮಾತ್ರ ಮಹಿಳೆಯರ ಮೇಲೆ ಅಟ್ಯಾಕ್ ಮಾಡಿವೆ ಎನ್ನಲಾಗಿದೆ‌.

ಇಬ್ಬರು ಮಹಿಳೆಯರ ಮೇಲೆ ಮರಿ ದಾಳಿ ಮಾಡಿದೆ ಆದ್ರೆ, ಅದ್ರಲ್ಲಿ ಓರ್ವ ಮಹಿಳೆ ಗೀತಾ ನಾಗಪ್ಪ ದೊಡ್ಮನಿ ಎಂಬುವವರಿಗೆ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ದಾಳಿ ಮಾಡಿದ ವೇಳೆ ಮಹಿಳೆಯರು ಕಿರುಚಾಡಿದ್ದಾರೆ. ಹೀಗಾಗಿ ಅಲ್ಲೇ ಇದ್ದ ಸಾರ್ವಜನಿಕರು ಬಂದು ಮರಿ ಯನ್ನೂ ಅಲ್ಲಿಂದ ಓಡಿಸಿದ್ದಾರೆ ಎನ್ನಾಲಾಗಿದೆ.

ಘಟನೆಯಲ್ಲಿ ಓರ್ವ ಮಹಿಳೆಯ ಮುಖಕ್ಕೆ ಹಾಗೂ ಮೂಗಿಗೆ ಗಾಯವಾಗಿದ್ದು. ಚಿಕಿತ್ಸೆಗಾಗಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!