ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ..!

ಶಿಗ್ಗಾವಿ : ಅನ್ನದಾನತನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ,
ಹಾವೇ‌ರಿ‌ ಜಿಲ್ಲೆ ಶಿಗ್ಗಾವಿ ತಾಲೂಕಿನ ದುಂಢಶಿ‌ ಗ್ರಾಮದ ಬಳಿ ನಡೆದಿದೆ.

ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂಬುವವರೇ ಕರಡಿ ದಾಳಿಗೆ ತುತ್ತಾದವರು.
ಇಂದು ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿದ ಕರಡಿ, ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿದೆ. ಪರಿಣಾಮ ರೈತ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಕೆಲಹೊತ್ತು ನರಳಾಡುತ್ತ ಬಿದ್ದಿದ್ದಾನೆ.

ನಂತರ, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆ‌ಮಾಡಿ ಗಂಭೀರ ಗಾಯಗೊಂಡ ರೈತನನ್ನು
ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

error: Content is protected !!