ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ.

ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ.

ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ ದೇವರನ್ನು ಹಿಡಿದ ವ್ಯಕ್ತಿ ಮತ್ತು ದರ್ಶನಕ್ಕೆಂದು ಹೋಗಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ.

ಇನ್ನು ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

error: Content is protected !!