ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮುಖಂಡರು ಹಾಗೂ ಗ್ರಾಮದ ನೂರಾರು ಜನ ಬಿಜೆಪಿ ಕಾರ್ಯಕರ್ತರು ಇಂದು ಯಲ್ಲಾಪುರಕ್ಕೆ ತೆರಳಿ, ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಭೇಟಿಯಾಗಿದ್ರು.

ಮುಂಬರುವ ಜಿಲ್ಲಾಪಂಚಾಯತಿ ಚುನಾವಣೆಗೆ ಇಂದೂರು ಜಿ ಪಂ ಕ್ಷೇತ್ರದಿಂದ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ್ ರವರಿಗೇ ಅಭ್ಯರ್ಥಿಯನ್ನಾಗಿಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ್ ರವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಕಳೆದ ಎರಡು ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರು ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ್ ಪರವಾಗಿ ಅನುಕಂಪ ಇದೆ. ಅದಕ್ಕಾಗಿ ಅವರಿಗೆ ಟಿಕೆಟ್ ನೀಡಬೇಕು ಅಂತಾ ಗ್ರಾಮಸ್ಥರು ಮನವಿ ಮಾಡಿದ್ದಾರೆ.

error: Content is protected !!