ಸಚಿವ ಹೆಬ್ಬಾರ್ ಅಂದ್ರೆ ರೈತರ ಪಾಲಿನ ಭಗೀರಥ: ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ

ಮುಂಡಗೋಡ; ಸಚಿವ ಶಿವರಾಮ್ ಹೆಬ್ಬಾರ್
ಕ್ಷೇತ್ರದ ರೈತರ ಮನಸಲ್ಲಿ ಭಗೀರಥರ ಸ್ಥಾನ ಪಡೆದಿದ್ದಾರೆ ಅಂತಾ ಹಿರಿಯ ಪತ್ರಕರ್ತ, ಸಂಪಾದಕ ಹರಿಪ್ರಕಾಶ್ ಕೋಣೆಮನೆ ಸಚಿವ ಹೆಬ್ಬಾರ್ ರವರನ್ನು ಹಾಡಿಹೊಗಳಿದ್ರು.

ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್ (ಸೆಲ್ಕೋ) ಸಂಸ್ಥೆಗಳು ನೀಡಿದ ಡಯಾಲಿಸಿಸ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಸಚಿವರ ಪ್ರಯತ್ನದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಇನ್ನು, ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಡಯಾಲಿಸಿಸ್ ವಾರ್ಡ್ ಅನ್ನು ನಿರ್ಮಾಣ ಮಾಡಿದ್ದು ಶ್ಲಾಘನೀಯ ಅಂತಾ ಮೆಚ್ಚುಗೆ ವ್ಯಕ್ತ ಪಡಿಸಿದ ಅವ್ರು, ಸಚಿವರ ಜನಪರ ನಿಲುವುಗಳನ್ನು ಕೊಂಡಾಡಿದರು.

****************************

ಜಾಹೀರಾತು

error: Content is protected !!