ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ. ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಲೇ ಸಾಗಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ‌. ನಾವೂ ಎಲ್ಲಾ ರೀತಿಯ ಚಿಕಿತ್ಸೆ ಮಾಡುತ್ತಿದ್ದೇವೆ ಅಂತಾ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ರಂಗನಾಥ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕ್ಷಣ ಕ್ಷಣಕ್ಕೂ ಅಪ್ಪುವಿನ ಆರೋಗ್ಯ ಗಂಭೀರವಾಗುತ್ತಲೇ ಸಾಗಿದೆ ಅಂತಾ ಮಾಹಿತಿ ಲಭ್ಯವಾಗ್ತಿದೆ.

ಗಣ್ಯರ ದಂಡು ಆಸ್ಪತ್ರೆಯತ್ತ..!
ಇನ್ನು ನಟ ಪುನಿತ್ ಆರೋಗ್ಯ ಸ್ಥಿತಿ ಗಂಭಿರವಾಗಿದೆ ಅಂತಾ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ಗಣ್ಯರ ದಂಡೇ ಹರಿದು ಬರ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ, ಚಿತ್ರರಂಗದ ಗಣ್ಯರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಹೀಗಾಗಿ ಆಸ್ಪತ್ರೆ ಹಾಗೂ ಪುನಿತ್ ನಿವಾಸದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

error: Content is protected !!