ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ‌ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ‌ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ ಸರ್ವತೋಮುಖ‌ ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಎಲ್ಲ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ, 2023 ರ ಚುನಾವಣೆಯಲ್ಲಿ ಪೂರ್ಣಬಹುಮತದ ಸರ್ಕಾರ ತರುವಲ್ಲಿ ಯಶಸ್ವಿ ಆಗುತ್ತಾರೆ ಅಂತಾ ವಿಶ್ವಾಸ ವ್ಯಕ್ತ ಪಡಿಸಿದ್ರು.

***************************************

ಜಾಹೀರಾತುಗಳು

error: Content is protected !!