ನಿದ್ದೆಯಿಂದ ಎದ್ದ ಮುಂಡಗೋಡ PWD, ಅಮ್ಮಾಜಿ ಕೆರೆ ದಂಡೆಯ ಮೇಲೆ ಸುರಕ್ಷತಾ ಕ್ರಮ..!

ಮುಂಡಗೋಡ: ಪಟ್ಟಣದ ಹೊರ ವಲಯದಲ್ಲಿ ಇತ್ತಿಚೆಗೆ ಸಂಭವಿಸಿದ ಕಾರು ದುರಂತದಲ್ಲಿ ದಂಪತಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ಹೀಗಾಗಿ, ಅಪಘಾತಗಳಿಗೆ ಆಮಂತ್ರಣ ನೀಡುತ್ತಿದ್ದ ಅಮ್ಮಾಜಿ ಕೆರೆಯ ದಂಡೆಯ ಮೇಲೆ ಬೇಲಿ ಹಾಕಲಾಗಿದೆ. ಇಲ್ಲಿನ ಪಿಡಬ್ಲ್ಯೂಡಿ ಇಲಾಖೆ ಈಗಷ್ಟೆ ಎಚ್ಚೆತ್ತುಕೊಂಡಿದ್ದು ಕೆರೆಯ ದಂಡೆಯ ಮೇಲೆ ಕಟ್ಟಿಗೆಯ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಕೆಂಪು ಪಟ್ಟಿಯನ್ನು ಕಟ್ಟಲಾಗಿದೆ. ಅಲ್ಲದೇ ಸಣ್ಣ ಸಣ್ಣ ಚೀಲಗಳನ್ನು ತುಂಬಿ ಇಡಲಾಗಿದೆ.. ಇದ್ರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸುವುದನ್ನು ಕೊಂಚ ತಪ್ಪಿಸಲು ಕ್ರಮ ಕೈಗೊಂಡಿದೆ.