ಅರಶಿಣಗೇರಿ ಕಾಲುವೆ ಕಾಮಗಾರಿ ಕಳಪೆ, ದುರಸ್ಥಿ ಮಾಡುವಂತೆ ರೈತರ ಆಗ್ರಹ..!

ಮುಂಡಗೋಡ: ತಾಲೂಕಿನ ಅರಶಿಣಗೇರಿ ಕೆರೆಯ ಕಾಲುವೆಯನ್ನು ಆದಷ್ಟು ಬೇಗ ದುರಸ್ತಿ ಮಾಡಿಸಿ ರೈತರಿಗೆ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಡಬೇಕಾಗಿ ರೈತರು ಮನವಿ ಮಾಡ್ತಿದಾರೆ.

ಅರಶಿಣಗೇರಿ, ಅಗಡಿ ಹುನಗುಂದ ಗ್ರಾಮಗಳ ರೈತರ ಜೀವನಾಡಿಯಾಗಿರೋ ಅರಶಿಣಗೇರಿ ಕೆರೆಯ ಕಾಲುವೆಯನ್ನು ಈಗಾಗಲೇ ದುರಸ್ಥಿ ಕಾರ್ಯ ಮಾಡಿರೋ ಚಿಕ್ಕ ನೀರಾವರಿ ಇಲಾಖೆ ಅರ್ದಮರ್ದ ಕೆಲಸ ಮಾಡಿ ಹೋಗಿದ್ದಾರೆ ಅಲ್ಲದೇ ಹಾಗೆ ಮಾಡಿರೋ ಕೆಲಸವನ್ನೂ ಕಳಪೆಯಾಗಿ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯ ದುರಸ್ತಿ ಮಾಡಿ, ಕಾಮಗಾರಿ ನಡೆಸಬೇಕು ಅಂತಾ ರೈತರು ಆಗ್ರಹಿಸಿದ್ದಾರೆ..

error: Content is protected !!