ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ.

ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು‌. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್‌ಪೆಕ್ಟರ್ ಸುನೀಲ್ ನಾಯಕ್‌ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ

error: Content is protected !!