ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ.

ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್‌ ನಲ್ಲಿ ವಿಡಿಯೋ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸಂದೇಶ ಕಳಿಸಿದ್ದಾರೆ. ನಿರ್ಲಕ್ಷ ತೋರಿರುವ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

error: Content is protected !!