ಮುಂಡಗೋಡ: ಪಟ್ಟಣದಲ್ಲಿ ಇಂದು ಶ್ರೀರಾಮ ಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ಬೀದಿಗಿಳಿದಿದ್ದವು. ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೀತು.

ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಕೈಗೊಂಡ ಹಿಂದು ಕಾರ್ಯಕರ್ತರು ಶೀಘ್ರವೇ ಹಿಂದು ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳನ್ನ ಬಂಧಿಸಿ, ಅವ್ರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಂತಾ ಅಗ್ರಹಿಸಿದ್ರು. ಈ ವೇಳೆ ನೂರಾರು ಸಂಖ್ಯೆಯ ಹಿಂದು ಕಾರ್ಯಕರ್ತರು ಭಾಗಿಯಾಗಿದ್ರು.

ಪ್ರತಿಭಟನೆಗೆ ಗೋ ಮಾತೆ ಸಾಥ್..!
ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗೋಮಾತೆಯೊಂದು ಪ್ರತಿಭಟನಾ ಸ್ಥಳಕ್ಕೆ ಬಂದು ನಿರ್ಭಿಡೆಯಿಂದ ಪ್ರತಿಭಟನೆಗೆ ಸಾಥ್ ನೀಡಿತು. ಇದನ್ನು ಕಂಡ ಹಿಂದು ಕಾರ್ಯಕರ್ತರು ಸಂತಸಗೊಂಡರು.

error: Content is protected !!