ಅಂಕೋಲಾ: ಉದ್ಯಮಿ ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು,
ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ.

ಎಪ್ರಿಲ್ 4 ಶಿಕ್ಷೆ ತೀರ್ಪು..!
ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ‌‌‌.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ,
16ನೇ ಆರೋಪಿ ಉತ್ತರ ಕನ್ನಡದ ಆನಂದ ನಾಯಕ್ ದೋಷಮುಕ್ತರಾಗಿದ್ದಾರೆ.

ಉಳಿದಂತೆ 9 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದ್ದು, ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ., ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ಎಂಬುವವರು ದೋಷಿಗಳು ಎಂದು ತೀರ್ಪು ಹೊರಬಿದ್ದಿದೆ.

ಅಂದಹಾಗೆ, 2013 ಡಿಸೆಂಬರ್ 21 ರಂದು ಅಂಕೋಲಾದಲ್ಲಿ ಉದ್ಯಮಿ ಆರ್.ಎನ್. ನಾಯಕ ಹತ್ಯೆಯಾಗಿತ್ತು. ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ‌. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ರು.
ಹಾಗೆಯೇ, ಬನ್ನಂಜೆ ರಾಜಾ ಪರ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು.

error: Content is protected !!