ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ.

ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ ದಂಪತಿಗಳಿಬ್ಬರು ದಾರುಣ ಸಾವು ಕಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಅದೇ‌ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಆತಂಕಕ್ಕೆ ಕಾರಣವಾಗಿದೆ. ಆದ್ರೆ, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಅನಾಹುತಗಳು ಸಂಭವಿಸಿಲ್ಲ.

error: Content is protected !!