ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು.

ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು..

ಪಿಎಸ್ಐ ಅಕ್ರಮ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ತನಿಖೆ ಮುಗಿಯುವವರೆಗೂ ತಾಳ್ಮೆಯಿಂದ ಇರಬೇಕು, ಈಗಾಗಲೇ ಸಾಕಷ್ಟು ಆರೋಪಿಗಳನ್ನ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಇನ್ನೂ ಹಲವರನ್ನು ಈ ಕೇಸ್ ನಲ್ಲಿ ಬಂಧಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಹೀಗಿರುವಾಗ ಇಲ್ಲ ಸಲ್ಲದ ಆರೋಪ ಮಾಡುವುದು ಸರಿಯಲ್ಲ ಅಂತಾ ಇದೇ ವೇಳೆ ಶಿವರಾಮ್ ಹೆಬ್ಬಾರ್ ಹೇಳಿದ್ರು‌.

error: Content is protected !!