ಮುಂಡಗೋಡ: ತಾಲೂಕಿನಲ್ಲಿ ಸತತ ಮಳೆ ಬೀಳುತ್ತಿರೋ ಕಾರಣಕ್ಕೆ ಮನುಷ್ಯರಷ್ಟೇ ತೊಂದರೆ ಅನುಭವಿಸುತ್ತಿಲ್ಲ. ಬದಲಾಗಿ ಕಾಡು ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದೆ.

ತಾಲೂಕಿನ ಕೊಪ್ಪ ಗ್ರಾಮದ ಹತ್ತಿರ ರಸ್ತೆಯ ಮದ್ಯೆ ಕಾಡು ಮರ ನಾಯಿ ಅಂತ ಕರಿಯುವ ಅಪರೂಪದ ಪ್ರಾಣಿ ಅನಾರೋಗ್ಯದಿಂದ ಬಳಲುತ್ತಿದೆ. ತೀವ್ರ ನಿಶ್ಯಕ್ತಿಯಿಂದ ಬಳಲುತ್ತಿರೋ ಅಪರೂಪದ ಪ್ರಾಣಿ ರಸ್ತೆ ದಾಟಲು ಸಹ ಪರದಾಡುತ್ತಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಪ್ರಾಣಿಯನ್ನು ದಾರಿಹೋಕರು ರಸ್ತೆಯ ಪಕ್ಕದಲ್ಲಿ ಇಟ್ಟು ರಕ್ಷಿಸಿದ್ದಾರೆ. ಆದ್ರೆ ಈ ಅಪರೂಪದ ಪ್ರಾಣಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆಯಿದೆ. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಅಪರೂಪದ ಪ್ರಾಣಿಯನ್ನು ಸಂರಕ್ಷಿಸಬೇಕಿದೆ.

error: Content is protected !!