ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ  ಆತ್ಮಹತ್ಯೆ, ಕಾರಣವಾದ್ರೂ ಏನು..?

ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ‌.

ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ‌ ಮೃತ ಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ‌.

ಇನ್ನು,ಯುವಕನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!