ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಕೃತಿ ವಿಕೋಪಗಳು ಸಂಭವಿಸಿದ್ದಲ್ಲಿ,
ತುರ್ತು ಸೇವೆಗೆ ಟೋಲ್‌ ಫ್ರೀಸಂಖ್ಯೆ-1077

ಲ್ಯಾಂಡ್ ಲೈನ್ ನಂ. 08382 – 229857, ವಾಟ್ಸಾಪ್ ಸಂಖ್ಯೆ : 9483511015 ಕ್ಕೆ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಸೂಚಿಸಲಾಗಿದೆ.

error: Content is protected !!