ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!

ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.

error: Content is protected !!