ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ.

ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು.

ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು. ವಿವಿಧ ವೇಷ ಭೂಷಣಗಳೊಂದಿಗೆ ದಲೈ ಲಾಮಾರವರ ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು.

error: Content is protected !!