ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?

ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇಂದು ಇಡೀ ದಿನ ಉಡುಪಿಯಲ್ಲಿಯೇ ತಂಹಲಿರುವ ಸಿಎಂ, ಅಲ್ಲಿಯೇ ಪರಿವೀಕ್ಷಣೆ ನಡೆಸಲಿದ್ದಾರೆ. ಮುಂದಿನಬಾರಿ ಬಂದಾಗ ಕಾರವಾರ, ಉತ್ತರಕನ್ನಡ ಜಿಲ್ಲೆಯ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ನಿನ್ನೆ ರಾತ್ರಿ ಉಡುಪಿಗೆ ಆಗಮಿಸಿರುವ ಸಿಎಂ ಬೊಮ್ಮಾಯಿ, ಜಿಲ್ಲೆಯಲ್ಲಿ ಇಂದು ನೆರೆ ಪ್ರವಾಸ ಕೈಗೊಳ್ಳಲಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ನೆರೆ ಹಾನಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

error: Content is protected !!