ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!


ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ.

ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ‌.

ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿ‌ಮಾಡುತ್ತಿದ್ದಾರೆ.

error: Content is protected !!