ಹುನಗುಂದದ ಸಹಕಾರಿ ಧುರೀಣ ಸಿದ್ದಪ್ಪ ಬೀರವಳ್ಳಿ ವಿಧಿವಶ..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಸಹಕಾರಿ ಧುರೀಣ, ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದಪ್ಪ ಸಣ್ಣಕಲ್ಲಪ್ಪ ಬೀರವಳ್ಳಿ(65) ಹೃದಯಾಘತದಿಂದ ನಿಧನರಾಗಿದ್ದಾರೆ.

ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿರೋ ಸಿದ್ದಪ್ಪ ಬೀರವಳ್ಳಿ, ಮೃದುಸ್ವಭಾವದ, ಜನಾನುರಾಗಿ ವ್ಯಕ್ತಿತ್ವದವರಾಗಿದ್ದರು. ಈ ಹಿಂದೆ ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದಪ್ಪ ಬೀರವಳ್ಳಿ, ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು.

ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರೋ, ಸಿದ್ದಪ್ಪ ಬೀರವಳ್ಳಿಯವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

error: Content is protected !!