ರಾಕ್ಷಸ ಮಳೆ: ನದಿ ನೀರಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ..!

ಉಡುಪಿ: ರಾಕ್ಷಸ ಮಳೆಯ ರಣಭೀಕರತೆ ಮುಂದುವರೆದಿದೆ. 7 ವರ್ಷದ ಬಾಲಕಿಯೊಬ್ಬಳು ಕಾಲುಸಂಕದಿಂದ ಕೆಳಗೆ ಬಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಬೀಜಮಕ್ಕಿಯಲ್ಲಿ ನಡೆದಿದೆ.

7 ವರ್ಷ ವಯಸ್ಸಿನ ಸನ್ನಿಧಿ ಎಂಬ ಬಾಲಕಿಯೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಶಾಲೆಯಿಂದ ಮನೆಗೆ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ.

ಭಾರಿ ಮಳೆಯ ನಡುವೆಯೇ ಶಾಲೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ಬಾಲಕಿ ಕಾಲುಸಂಕ ದಾಟುವಾಗ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ನದಿ ನೀರಿನ ರಭಸಕ್ಕೆ ಬಾಲಕಿ ಕೊಚ್ಚಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಬಾಲಕಿಗಾಗಿ ನದಿಯಲ್ಲಿ ಶೋಧ ನಡೆಸಲಾಗುತ್ತಿದೆ.

error: Content is protected !!