ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!

ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ‌ ಲಭ್ಯವಾಗಿದೆ.

ಸದ್ಯ ರಕ್ತದ ಮಡುವಿನಲ್ಲಿ ಬಿದ್ದಿರೊ ಕರುವಿನ ಕಳೇಬರವನ್ನು ಅಲ್ಲಿಂದ ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಬಿಡಾಡಿ ದನಗಳು ನಿತ್ಯವೂ ಹೀಗೆ ಒಂದಿಲ್ಲೊಂದು ದುರಂತಕ್ಕೆ ಈಡಾಗುತ್ತಿವೆ. ಹೀಗಿದ್ರೂ ಪಟ್ಟಣ ಪಂಚಾಯತಿ ಅಧಿಕಾರಿಗಳು ಮಾತ್ರ ಗಪ್ ಚುಪ್ ಆಗಿ ಕುಳಿತು ಬಿಟ್ಟಿದ್ದಾರೆ ಅಂತಾ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸ್ತಿದಾರೆ.

error: Content is protected !!